Thursday, December 31, 2009

ಶ್ರೀಕೃಷ್ಣದೇವರಾಯ

ಸ್ನೇಹಿತರೆ,
ನನ್ನ 5 ನೇ ಪುಸ್ತಕ ಶ್ರೀಕೃಷ್ಣದೇವರಾಯ ಬಿಡುಗಡೆಗೆ ಸಿದ್ಧವಾಗಿದೆ. ಪುಸ್ತಕದ ಬಿಡುಗಡೆ ಸಮಾರಂಭದ ಆಹ್ವಾನ ಪತ್ರಿಕೆ ಮತ್ತು ಮುಖಪುಟಗಳು ಇಲ್ಲಿವೆ. ಬಿಡುವು ಮಾಡಿಕೊಂಡು ಬನ್ನಿ.



Friday, May 1, 2009

ಮಿಥಿಕ್ ಸೊಸೈಟಿ 100 ಹಾಗೂ ಪ್ರಶಸ್ತಿ

ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಮಿಥಿಕ್ ಸೊಸೈಟಿ ಇದೇ ಮೇ 3 ರಿಂದ 5 ನೇ ತಾರೀಖಿನವರೆಗೆ ಮೂರು ದಿನಗಳ ಸಮಾರೋಪ ಸಮಾರಂಭ ಆಚರಿಸುತ್ತಿದೆ.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಜನ ಹಿರಿಯರನ್ನು ಹಾಗೂ 7 ಜನ ಯುವ ಸಾಧಕರನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಲಿದೆ. ಯುವ ಸಾಧಕರ ಪಟ್ಟಿಯಲ್ಲಿ ನನ್ನ ಹೆಸರೂ ಇದೆ.

ಉಳಿದಂತೆ ಎಲ್ಲಾ ಪ್ರಶಸ್ತಿ ವಿಜೇತರ ಪಟ್ಟಿ ಹಾಗೂ ಕಾರ್ಯಕ್ರಮದ ವಿವರಣೆ ವಿಜಯ ಕರ್ನಾಟಕದಲ್ಲಿ ಪ್ರಕಟವಾಗಿದೆ. ಅದರ ಸುದ್ದಿ ತುಣುಕು ಇಲ್ಲಿದೆ.

ಗಮನಕ್ಕೆ: ದೊಡ್ಡ ಇಮೇಜ್ ಗೆ ಫೋಟೋ ಮೇಲೆ ಕ್ಲಿಕ್ ಮಾಡಿ.

Tuesday, April 21, 2009

ಜಲಿಯನ್ ವಾಲಾ ಬಾಗ್ ವಿಡಿಯೊಗಳು

ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಕುರಿತ ಅನೇಕ ವಿಡಿಯೋ ಕ್ಲಿಪ್ಪಿಂಗ್ ಗಳಿವೆ. ಇವೆಲ್ಲ ಬೇರೆ ಬೇರೆ ಸಿನಿಮಾಗಳು, ಡಾಕ್ಯುಮೆಂಟರಿಗಳಿಂದ ಆಯ್ಕೆ ಮಾಡಿದವು. ಹತ್ಯಾಕಾಂಡಕ್ಕೆ ಉಧಮ್ ಸಿಂಗ್ 21 ವರ್ಷದ ನಂತರ ಸೇಡು ತೀರಿಸಿಕೊಂಡಿದ್ದ. ಆತನ ಬಗ್ಗೆ ಬಿಬಿಸಿ ತಯಾರಿಸಿದ್ದ 30 ನಿಮಿಷದ ಸಾಕ್ಷ್ಯಚಿತ್ರವೂ ಇಲ್ಲಿದೆ. ಈ ಎಲ್ಲವೂ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ನೈಜ ಚಿತ್ರಣ ತೋರಿಸುತ್ತವೆ.























Sunday, April 19, 2009

ಟೀವೀ ನೈನೂ ಮತ್ತು ’ಚಂದ್ರಯಾನ’ವೂ..

(ಇದನ್ನು ವಿಕಾಸ್ ಹೆಗಡೆ ಅವರ 'ವಿಕಾಸ ವಾದ' ಬ್ಲಾಗ್ ನಿಂದ ಎತ್ತಿಕೊಳ್ಳಲಾಗಿದೆ. ಇದರಲ್ಲಿ ಅವರು ತಮ್ಮದೆ ಆದ ವಿಶಿಷ್ಟ ಶೈಲಿಯಲ್ಲಿ ಚಂದ್ರಯಾನ ಹಾಗೂ ಜಲಿಯನ್ ವಾಲಾ ಬಾಗ್ ಪುಸ್ತಕಗಳ ಪರಿಚಯ ಮಾಡಿಕೊಟ್ಟಿದ್ದಾರೆ. ನಿಮಗಾಗಿ ಅದನ್ನು ಇಲ್ಲಿ ಮರು ಪ್ರಕಟಿಸಲಾಗಿದೆ)


ನಿನ್ನೆ ರಾತ್ರಿ ೧೦:೩೦, ಅಪ್ಪನ ಫೋನಿಂದ ಮೆಸೇಜು ಬಂತು - "ನಿನ್ನನ್ನ TV9ನಲ್ಲಿ ನೋಡಿದೆವು! "
ಎದೆ ಧಸಕ್ ಎಂದಿತು. ಚಂದನದಲ್ಲೋ, ಕಸ್ತೂರಿಯಲ್ಲೋ, ಈ ಟೀವಿಯಲ್ಲೋ ನೋಡಿದೆ ಎಂದಿದ್ದರೆ ಏನಾಗುತ್ತಿರಲಿಲ್ಲ. ಆದರೆ ಹೇಳಿ ಕೇಳಿ ಅದು ಟೀವಿ ನೈನು! ಸುದ್ದಿಯನ್ನು ಮನರಂಜನೆಯಂತೆ ಕೊಟ್ಟು, ಮನರಂಜನೆಯನ್ನು ಅತಿರೇಕ ಮಾಡಿ, ಅತಿರೇಕವನ್ನು ಮಾಮೂಲಿನಂತೆ ದಿನವಿಡೀ ತೋರಿಸಿ ’ಉತ್ತಮ ಸಮಾಜಕ್ಕಾಗಿ’ ದುಡಿಯುತ್ತಿರುವ ಅಪರೂಪದ ವಾಹಿನಿ ಅದು. ಅಂದ ಮೇಲೆ ಗಾಬರಿಯಾಗದೇ ಇರುತ್ತದೆಯೇ. ಅವರ ಕ್ಯಾಮೆರಾ ಎಲ್ಲೆಲ್ಲಿ ಇರುತ್ತದೋ ಯಾರಿಗೆ ಗೊತ್ತು. ನಾವು ಹುಡುಗರು ಎಲ್ಲೆಲ್ಲೋ ನಿಂತಿರುತ್ತೇವೆ, ಏನೇನೋ ಮಾಡುತ್ತಿರುತ್ತೇವೆ. ಇನ್ಯಾವುದೋ ವರದಿಯ ಸಂದರ್ಭದಲ್ಲಿ ಅಕಸ್ಮಾತಾಗಿಯೋ , ಉದ್ದೇಶಪೂರ್ವಕವಾಗಿಯೋ ನಮ್ಮ ಮೇಲೆ ಕ್ಯಾಮೆರಾ ಕಣ್ಣು ಬಿದ್ದು ಅದು ಬೇರೆ ಏನೋ ಅರ್ಥ ಕೊಟ್ಟು ಬ್ರೇಕಿಂಗ್ ನ್ಯೂಸ್ ಆಗಿಹೋಯಿತಾ ಎಂದು ಹೆದರಿಕೆಯಾಯಿತು.

ರೆಹಮಾನ್, ಆ ಹುಡುಗ್ರು ಅಲ್ಲಿ ಎಷ್ಟೊತ್ತಿಂದ ನಿಂತಿದಾರೆ?
.................................
ಅವರ ಕೈಯಲ್ಲಿ ಏನೋ ವೈಟ್ ಕಲರ್ ವಸ್ತು ಇದೆಯಲ್ಲ, ಅದು ಏನೂಂತ ಹೇಳಕ್ಕಾಗತ್ತಾ?
.................................
ಅವರು ಇನ್ನೂ ಅಲ್ಲೇ ಎಷ್ಟು ಹೊತ್ತು ನಿಂತಿರ್ತಾರೆ ಅಂತ ಹೇಳ್ತೀರಾ
...............

ಹೀಗೆಲ್ಲಾ ಅವರ ವರದಿಗಾರ-ಸ್ಟುಡಿಯೋ ಮಧ್ಯೆ ಸಂಭಾಷಣೆ ಕಲ್ಪಿಸಿಕೊಂಡು ದಿಗಿಲಾದೆ. ಯಾವುದಕ್ಕೆ ಏನು ರೆಕ್ಕೆಪುಕ್ಕ ಸೇರಿಸಿ, ಮಸಾಲೆ ಅರೆದು, ಬಣ್ಣ ಹಚ್ಚಿ ತೋರಿಸಿಬಿಡುತ್ತಾರೋ ಯಾರಿಗೆ ಗೊತ್ತು ನಮ್ ಗ್ರಾಚಾರ! :)

ಕೆಲವರ್ಷಗಳ ಹಿಂದೆ ಹೀಗೇ ಆಗಿತ್ತು. ನಾನು ಮೊದಲು ಕೆಲಸ ಮಾಡುತ್ತಿದ್ದ ಕಂಪನಿಯ ಕ್ಯಾಂಪಸ್ಸಿನಲ್ಲೇ ಕಾಲ್ ಸೆಂಟರ್ ಒಂದಿತ್ತು. ಆಗ ಅದ್ಯಾವುದೋ ಕಾಲ್ ಸೆಂಟರ್ ಹುಡುಗಿಯನ್ನು ಕ್ಯಾಬ್ ಚಾಲಕನೊಬ್ಬ ಎತ್ತಾಕಿಕೊಂಡು ಹೋಗಿ ರೇಪ್ & ಕೊಲೆ ಮಾಡಿದ ಘಟನೆ ಹಸಿಹಸಿಯಾಗಿತ್ತು. ಕ್ರೈಂ ಡೈರಿ, ಸ್ಟೋರಿ ಮುಂತಾದ ಕ್ಯಾಮೆರಾಗಳು ಕಾಲ್ ಸೆಂಟರ್ ಗಳ ಹಿಂದೆ ಬಿದ್ದಿದ್ದವು. ನಮಗೂ ಎರಡನೇ ಪಾಳಿ ಇರುತ್ತಿದ್ದುದ್ದರಿಂದ ರಾತ್ರಿ ೧ ರ ವರೆಗೆ ಆಫೀಸಿನಲ್ಲೇ ಇರಬೇಕಾಗುತ್ತಿತ್ತು. ಆಗಾಗ ಗಾಳಿ ಸೇವನೆಗೆಂದು, ನಿದ್ದೆ ಬರದಿರಲೆಂದು ನಾವು ಹೊರಗೆ ಹೋಗುತ್ತಿದ್ದೆವು. ಅದೇ ಜಾಗಕ್ಕೆ ಕಾಲ್ ಸೆಂಟರಿನ ಹುಡುಗ ಹುಡುಗಿಯರೂ ಬರುತ್ತಿದ್ದರು.

ಆ ಹುಡುಗಿಯರ ಅಸ್ತವ್ಯಸ್ತ ಬಟ್ಟೆಗಳು, ಅವರು ಸೇದುತ್ತಿದ್ದ ಪ್ಯಾಕುಗಟ್ಟಲೇ ಸಿಗರೇಟುಗಳು, ಯಾವ ಮುಲಾಜೂ ಇಲ್ಲದಂತೆ ಹುಡುಗಿಯರ ಮೈಮೇಲೆ ಎಲ್ಲೆಲ್ಲೋ ಹರಿದಾಡುತ್ತಿದ್ದ ಹುಡುಗರ ಕೈಗಳು, ಮಬ್ಬುಗತ್ತಲಲ್ಲಿ ಪರಸ್ಪರ ದಾಹ ತೀರಿಸಿಕೊಳ್ಳುತ್ತಿದ್ದ ತುಟಿಗಳು, ಚಳಿಗಾಲದ ಹೀಟ್ ಟ್ರಾನ್ಸ್ ಫರ್ ಗಳು ಎಲ್ಲವನ್ನೂ ಸುತ್ತಮುತ್ತಲೇ ನೋಡುತ್ತಿದ್ದೆವು. ಎಥ್ನಿಕ್ ಡೇ ಹೆಸರಲ್ಲಿ ಕಾಲ್ ಸೆಂಟರ್ ಹುಡುಗೀರು ಸೀರೆ ಉಟ್ಟುಕೊಂಡು ಬಂದಾಗ ಮಾತ್ರ ನಮಗೆ ಬಹಳ ಸಂಕಟವಾಗುತ್ತಿತ್ತು. ಅದ್ಯಾಕೆ ನೆಟ್ಟಗೆ ಸೀರೆ ಉಟ್ಟುಕೊಂಡು ಬರುತ್ತಿರಲಿಲ್ವಾ ಅಂತೀರಾ? ಇಲ್ಲ ಹಾಗೇನಿಲ್ಲ , ಪಾಪ ಸರಿಯಾಗೇ ಸೀರೆ ಉಟ್ಟುಕೊಂಡೇ ಬಂದಿರ್ತಿದ್ರು, ಆದರೆ ಹುಡುಗೀರು ಸೀರೆ ಉಟ್ಟುಕೊಂಡು ಸಿಗರೇಟ್ ಸೇದುವುದನ್ನು ನೋಡೋಕಾಗೋಲ್ಲ ಕಣ್ರೀ. ಬೇಕಿದ್ರೆ ಜೀನ್ಸ್ ಟೀಶರ್ಟ್ ಅಥವಾ ಇನ್ನೇನನ್ನೋ ಹಾಕಿಕೊಂಡು ಸೇದಿದರೆ ಅದು ನೋಡೆಬಲ್.

ನೀವು ಹುಡುಗರು ಯಾವ ಬಟ್ಟೆ ಬೇಕಿದ್ರೂ ಹಾಕಿಕೊಂಡು ಏನ್ ಬೇಕಾದ್ರೂ ಮಾಡ್ತೀರಾ, ಹುಡುಗಿಯರಿಗೆ ಮಾತ್ರ ಕಟ್ಟು ಪಾಡು, ಶೋಷಣೆ, ದೌರ್ಜನ್ಯ ಅದು ಇದು ಅಂತ ಸ್ತ್ರೀವಾದಿಗಳು ಮೂದಲಿಸಿದರೂ ಪರ್ವಾಗಿಲ್ಲ, ಸೀರೆ ಉಟ್ಟುಕೊಂಡರೆ ಸಭ್ಯರೆಂಬ ಭಾವನೆಯೋ ಅಥವಾ ಸೀರೆ ಉಟ್ಟಿರುವವರೆಲ್ಲಾ ಅಮ್ಮಂದಿರಂತೆ ಎಂಬ ಮುಗ್ಧತೆಯೋ ಗೊತ್ತಿಲ್ಲ, ನಮಗೆ ಆ ಸೀರೆ ಮೇಲೆ ಚಿಕ್ಕಂದಿನಿಂದ ಏನೋ ಗೌರವ. ಇರ್ಲಿ ಬಿಡಿ. ಯಾರಿಗೂ ಏನೂ ಹೇಳುವ ಹಾಗಿಲ್ಲ, ಎಲ್ಲರೂ ೨೧ ನೇ ಶತಮಾನದವರರು, modern, forward, broad minded and independent. They know what is right and wrong. They don't want moral policing by anybody.

ಇದೇನು ಇಂಗ್ಲೀಷ್ ಬಂತು ಮಧ್ಯದಲ್ಲಿ !. ಹೋಗ್ಲಿ ಬಿಡಿ.. ಅದೆಲ್ಲ ವಿಷ್ಯ ಬೇಡ ಈಗ .

ನಮ್ಮ ತಲೆಬಿಸಿ ಇದ್ದದ್ದು ಟೀವಿ ಕ್ಯಾಮೆರಾಗಳ ಬಗ್ಗೆ ಮಾತ್ರ. ಅವರು ಎಲ್ಲೋ ಕ್ಯಾಮೆರಾ ಇಟ್ಟು ಫೋಕಸ್ ಮಾಡಿ ಕಾಲ್ ಸೆಂಟರ್ ಜನರ ಜೊತೆ ನಮ್ಮನ್ನೂ ಸೇರಿಸಿ ಟೀವಿನಲ್ಲಿ ತೋರಿಸಿ ಅದನ್ನು ನಮ್ಮೂರಲ್ಲೆಲ್ಲಾ ನೋಡಿ ಫಜೀತಿಯಾಗಿ ಬಿಡುತ್ತದೆ ಎಂಬ ಭಯ ಇತ್ತು. ಈ ಬ್ಲಾಗ್, ಇಂಟರ್ನೆಟ್ ನಲ್ಲೆಲ್ಲಾ ಏನೇ ಬರೆದುಕೊಂಡರೂ ಪರ್ವಾಗಿಲ್ಲ , ಯಾರೂ ಓದಲ್ಲ. ಆದರೆ ಟೀವಿ ಮಾತ್ರ ಹಾಗಲ್ಲ ನೋಡಿ. :)

ಯಾವುದೋ ವಿಷಯ ಹೇಳಲು ಹೋಗಿ ಏನೋ ಹೇಳುತ್ತಾ ಕೂತೆ. ನೀವೂ ಅದನ್ನು ಓದುತ್ತಾ ಕೂತಿರಿ. ಅಸಲು ವಿಷಯ ಇನ್ಮುಂದಿದೆ.

ಎಲೆಕ್ಟ್ರಾನಿಕ್ ಮಾಧ್ಯಮಗಳ ಈ ಕಾಲದಲ್ಲಿ ನಿನ್ನೆಯ ಸುದ್ದಿ ಇವತ್ತಿಗೆ ಹಳತಾಗಿ ಹೋಗಿರುತ್ತದೆ. ಏನಾದರೂ ಘಟನೆಗಳು ನೆಡೆದಾಗ ಅವು ಹಸಿ ಇರುವಾಗಲೇ ಅದನ್ನು ಸರಿಯಾಗಿ ಬಳಸಿಕೊಳ್ಳುವುದು ಒಳ್ಳೆಯದು. ಇಂಗ್ಲೀಷ್ ಬರವಣಿಗೆಯ ಜಗತ್ತು ಇದನ್ನು ಯಾವತ್ತೋ ಅಳವಡಿಸಿಕೊಂಡಿದೆ. ಆದರೆ ಕನ್ನಡ ಜಗತ್ತು ಈಗೀಗ ಅಳವಡಿಸಿಕೊಳ್ಳುತ್ತಿದೆ. (ಅಥವಾ ಮೊದಲೇ ಅಳವಡಿಸಿಕೊಂಡಿದ್ದರೆ ನನ್ನ ಅಜ್ಞಾನವೆಂದು ಮನ್ನಿಸಿ). ಅಮೆರಿಕಾದಲ್ಲಿ ಟ್ವಿನ್ ಟವರ್ ದುರಂತ ಆದಾಗ ಕೆಲವೇ ತಿಂಗಳುಗಳಲ್ಲಿ ಆ ಘಟನೆಯದ ವಿವರಗಳನ್ನೊಳಗೊಂಡ ಹಲವಾರು ದಪ್ಪ ದಪ್ಪ ಪುಸ್ತಕಗಳು ಬಂದವು. ಆ ಘಟನೆ ಇನ್ನೂ ಜನರ ಮನಸಲ್ಲಿ ಹಸಿಯಿದ್ದುದರಿಂದ ಪುಸ್ತಕಗಳು ಬಿಸಿಬಿಸಿಯಾಗಿ ಖರ್ಚಾದವು. ಕನ್ನಡದಲ್ಲೂ ಕೂಡ ಮೊನ್ನೆ ಮೊನ್ನೆ ದೈತ್ಯ ಬರಹಗಾರ ರವಿ ಬೆಳಗೆರೆಯವರು ಮುಂಬೈ ಘಟನೆಯನ್ನು ವಿಷಯವಾಗಿರಿಸಿಕೊಂಡು ’ಮೇಜರ್ ಸಂದೀಪ್ ಹತ್ಯೆ’ ಎಂಬ ಪುಸ್ತಕ ಬರೆದು ಬಿಡುಗಡೆ ಮಾಡಿದರು. ಇದು ಭಾವನೆಗಳನ್ನು encash ಮಾಡಿಕೊಳ್ಳುವುದು ಎಂದು ಕೆಲವರು ಟೀಕಿಸಿದರೂ ಕೂಡ ಅಂತಹ ಘಟನೆಗಳ ಬಗ್ಗೆ ಆಳವಾಗಿ ತಿಳಿದುಕೊಳ್ಳಲು, ಜನರ ಮನಸಲ್ಲಿ ಇಳಿಯಲು ಸಹಕಾರಿಯಾಗುತ್ತವೆ.

ಈಗ ’ಚಂದ್ರಯಾನ’ದ ವಿಷಯಕ್ಕೆ ಬರೋಣ. ಕೆಲ ತಿಂಗಳುಗಳ ಹಿಂದೆ ನಮ್ಮ ವಿಜ್ಞಾನಿಗಳು ಚಂದ್ರಯಾನ-೧ ಯೋಜನೆಯನ್ನು ಯಶಸ್ವಿಯಾಗಿ ಕೈಗೊಂಡರು. ಇದು ಭಾರತದ ಹೆಮ್ಮೆಯ ಸಾಧನೆ. ನಿನ್ನೆ ’ಚಂದ್ರಯಾನ’ ಪುಸ್ತಕ ಬಿಡುಗಡೆಯಾಯಿತು. ಟೀವಿ ನೈನ್ ಉದ್ಯೋಗಿ ಶ್ರೀ ಶಿವಪ್ರಸಾದ್ ಮತ್ತು ಮಿತ್ರರು ಇಸ್ರೋ ಚಂದ್ರಯಾನದ ಯೋಜನೆಯ ವಿಷಯವನ್ನಿಟ್ಟುಕೊಂಡು ಪುಸ್ತಕ ಬರೆದಿದ್ದಾರೆ. ಕನ್ನಡ ಬರವಣಿಗೆ ಲೋಕದಲ್ಲಿ ಮಾಹಿತಿ ಸಾಹಿತ್ಯದ ಅಗತ್ಯತೆ ದೃಷ್ಟಿಯಿಂದ ಈ ಪುಸ್ತಕ ನಿಜವಾಗಿಯೂ ಒಂದು ಒಳ್ಳೆಯ ಸಾಮಗ್ರಿಯಾಗಿ ಹೊರಬಂದಿದೆ. ಈ ಪುಸ್ತಕದಲ್ಲಿ ಚಂದ್ರನ ಬಗ್ಗೆ ವಿವರಗಳಿವೆ, ಮತ್ತೊಮ್ಮೆ ದೇಶ ದೇಶಗಳ ನಡುವೆ space race ಶುರುವಾಗಲು ಕಾರಣವಾದ ’ಚಂದ್ರಯಾನ-೧’ ಯೋಜನೆಯನ್ನು ಹಂತ ಹಂತವಾಗಿ ವಿವರಿಸಲಾಗಿದೆ. ಮಾನವ ಚಂದ್ರನ ಮೇಲೆ ಏಕೆ ಅಷ್ಟು ಆಸಕ್ತಿ ತೋರಿಸುತ್ತಿದ್ದಾನೆ, ಚಂದ್ರನನ್ನು ಎಟುಕಿಸಿಕೊಂಡರೆ ಮನುಕುಲಕ್ಕೆ ಮುಂದೆ ಆಗುವ ಪ್ರಯೋಜನಗಳೇನು ಎಂಬುದಕ್ಕೆ ಇದುವರೆಗೂ ಜನಸಾಮಾನ್ಯರಿಗೆ ಗೊತ್ತೇ ಇರದ ರೋಚಕ ವಿಷಯಗಳಿವೆ. ಜೊತೆಗೆ ಭಾರತದ ಬಾಹ್ಯಾಕಾಶ, ಉಪಗ್ರಹ ಕ್ಷೇತ್ರದ ಹುಟ್ಟು ಬೆಳವಣಿಗೆಗಳ ವಿಷಯಗಳು ಮತ್ತು ವಿಶ್ವದ ಬಾಹ್ಯಾಕಾಶದ ಚಟುವಟಿಕೆಗಳ ವಿಷಯಗಳನ್ನೂ ಒಳಗೊಂಡಿದೆ. ಕೇರಳದ ’ತುಂಬಾ’ ಎಂಬ ಅತೀ ಕುಗ್ರಾಮವೊಂದರಲ್ಲಿ ಒಂದು ಹಳೇ ಚರ್ಚನ್ನೇ ಕಛೇರಿ ಮಾಡಿಕೊಂಡು ದನದ ಕೊಟ್ಟಿಗೆಯಲ್ಲಿ ಜೋಡಣೆ ಮಾಡಿ ಸೈಕಲ್ ನಲ್ಲಿ ಸಾಗಿಸಿ ಭಾರತದ ಮೊಟ್ಟ ಮೊದಲ ರಾಕೆಟನ್ನು ಆಕಾಶಕ್ಕೆ ಯಶಸ್ವಿಯಾಗಿ ಹಾರಿಸಿದ ಘಟನೆಯನ್ನು ಓದುತ್ತಾ ಹೋದಂತೆ ಅಕ್ಷರಶಃ ರೋಮಾಂಚನವಾಗುತ್ತದೆ. ದೇಶಕ್ಕೋಸ್ಕರ ಅಮೆರಿಕದ ಉನ್ನತ ಹುದ್ದೆಗಳನ್ನು ತೊರೆದು ಬಂದ ವಿಜ್ಞಾನಿಗಳು, ಇಸ್ರೋ(ISRO) ಸಂಸ್ಥೆಯ ಹುಟ್ಟು, ಬೆಳವಣಿಗೆ ಎಂತವರಲ್ಲೂ ಆಶ್ಚರ್ಯ, ಹೆಮ್ಮೆ ಮೂಡಿಸದೇ ಇರಲಾರದು. ಬಾಹ್ಯಾಕಾಶದ ಬಗ್ಗೆ ವಿವರಗಳು, ಗಗನಯಾತ್ರೆಯ ಒಳಹೊರಗು, ಅಮೆರಿಕಾ - ರಷ್ಯಾ ಶೀತಲ ಸಮರದಿಂದ ಶುರುವಾದ ಸ್ಪರ್ಧೆ, ಚಂದ್ರನ ಬಗ್ಗೆ ಇರುವ ಕಥೆಗಳು, ನಂಬಿಕೆಗಳು, ಇದಕ್ಕೆ ಸಂಬಂಧಪಟ್ಟ ಜಗತ್ತಿನ ಸ್ವಾರಸ್ಯಕರ ಘಟನೆಗಳು ಮುಂತಾದ ಹಲವು ವಿಷಯಗಳಿಂದ ಪುಸ್ತಕವು ಆಸಕ್ತಿಯಿಂದ ಓದಿಸಿಕೊಂಡು ಹೋಗುತ್ತದೆ.

ಚಂದ್ರಯಾನದಂತಹ ಯೋಜನೆಗಳ ಬಗ್ಗೆ ಜನರಲ್ಲಿ ಆಸಕ್ತಿ, ಗೌರವ ಮೂಡಿಸಲು, ಮಕ್ಕಳನ್ನು, ಯುವಕರನ್ನು ಇಂತಹ ಕ್ಷೇತ್ರಗಳ ಕಡೆಗೆ ಸೆಳೆಯಲು, ಸಂಶೋಧನಾ ಕೆಲಸಗಳ ಬಗ್ಗೆ ಆಸಕ್ತಿ ವಹಿಸುವಂತೆ ಮಾಡಲು ಇಂತಹ ಪುಸ್ತಕಗಳ ಅಗತ್ಯ ಬಹಳ ಇದೆ. ಪ್ರೌಢಶಾಲಾ ಮಟ್ಟದಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಹಕಾರಿಯಾಗಬಲ್ಲ, ಅಗತ್ಯವಾಗಿ ಓದಬೇಕಾದ ಪುಸ್ತಕ ಇದು. ಅಬ್ದುಲ್ ಕಲಾಂರವರು ಇದನ್ನು ಮೊದಲೇ ಅನೌಪಚಾರಿಕವಾಗಿ ಬಿಡುಗಡೆ ಮಾಡಿ ಶಭಾಷ್ಗಿರಿ ಕೊಟ್ಟಿದ್ದಾರೆ. ಇಂತಹ ಹೆಚ್ಚು ಹೆಚ್ಚು ಪುಸ್ತಕಗಳು ಬರಲಿ ಎಂದು ಆಸೆ ಪಡೋಣ.

ಇದರ ಜೊತೆಗೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಪ್ರತ್ಯಕ್ಷ ದರ್ಶಿ ನೂರು ವರ್ಷಕ್ಕಿಂತಲೂ ಹಿರಿಯರಾದ ಸುಧಾಕರ ಚತುರ್ವೇದಿಯವರಿಂದ ಶಿವಪ್ರಸಾದ್ ಅವರೇ ಬರೆದಿರುವ ’ಜಲಿಯನ್ ವಾಲಾಬಾಗ್’ ಎಂಬ ಪುಸ್ತಕವೂ ಬಿಡುಗಡೆಯಾಯಿತು. ನಾನಿನ್ನೂ ಓದಿಲ್ಲ.
*******************
ಇಷ್ಟೆಲ್ಲಾ ಮಾತಾಡಿ ಈಗ ಟೀವಿನೈನ್ ನಲ್ಲಿ ಅಪ್ಪ ಅಮ್ಮ ನನ್ನನ್ನು ಕಂಡದ್ದು ಹೇಗೆ ಅಂತಲೇ ಹೇಳಲಿಲ್ಲ ಅಲ್ವೇ?

ನಿನ್ನೆ ಚಂದ್ರಯಾನ ಮತ್ತು ಜಲಿಯನ್ ವಾಲಾಬಾಗ್ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಆಗ ಟೀವಿನೈನ್ ಕ್ಯಾಮರಾ ಪ್ರೇಕ್ಷಕರ ಗುಂಪನ್ನು ತೋರಿಸುವಾಗ ಅಲ್ಲೆಲ್ಲೋ ಮಧ್ಯದಲ್ಲಿ ಕೂತಿದ್ದ ನನ್ನನ್ನು ಕೂಡ ಫೋಕಸ್ ಮಾಡಿಬಿಟ್ಟಿದೆ. ಪುಸ್ತಕ ಬಿಡುಗಡೆ ಸುದ್ದಿಯನ್ನು ರಾತ್ರಿ ’ಜಸ್ಟ್ ಬೆಂಗಳೂರು’ ಎಂಬ ಕಾರ್ಯಕ್ರಮದಲ್ಲಿ ತೋರಿಸಿದ್ದಾರೆ. ಮನೆಯಲ್ಲಿ ಅಪ್ಪ ಅಮ್ಮ ಅದನ್ನು ನೋಡುವಾಗ ನಾನೂ ಅವರ ಕಣ್ಣಿಗೆ ಬಿದ್ದಿದ್ದೇನೆ ಅಷ್ಟೆ.

ಫೋನ್ ಮಾಡಿ ಇಷ್ಟು ವಿಷಯ ತಿಳಿದುಕೊಂಡ ನಂತರ ನಿರಾಳವೆನಿಸಿ ನಿದ್ದೆ ಹೋದೆ. :)

Tuesday, April 14, 2009

ಜಲಿಯನ್ ವಾಲಾ ಬಾಗ್ ಬಗ್ಗೆ ಡಾ.ಸ್ವಾಮೀಜಿ ಬರೆದದ್ದು

ಮೊನ್ನೆ ಬಿಡುಗಡೆಯಾದ ನನ್ನ ಹೊಸ ಪುಸ್ತಕ ಜಲಿಯನ್ ವಾಲಾ ಬಾಗ್ ಪುಸ್ತಕವನ್ನು ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮಿಜಿಯವರಿಗೆ ತಲುಪಿಸಿ, ಅವರ ಆಶೀರ್ವಾದ ಪಡೆದು ಬಂದಿದ್ದೆ. ಈ ಹಿಂದೆ ನಾನು ಬರೆದ ಪುಸ್ತಕಗಳ್ನೂ ಸಹ ಶ್ರೀಗಳವರಿಗೆ ತಲುಪಿಸಿದ್ದೆ. ಆಗೆಲ್ಲಾ ಪುಸ್ತಕಗಳು ಚನ್ನಾಗಿವೆ ಎಂದು ಆಶೀರ್ವದಿಸಿದ್ದರು. ಚಂದ್ರಯಾನ ಪುಸ್ತಕದ ನೂರು ಪ್ರತಿಗಳನ್ನು ತರಿಸಿಕೊಂಡು ತಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ತಿಗಳಿಗೆ ನೀಡಿದ್ದರು.
ಈಗ ಜಲಿಯನ್ ವಾಲಾ ಬಾಗ್ ಬಗ್ಗೆ ಗುರುಗಳು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಕೇವಲ ನನಗೊಬ್ಬನಿಗೆ ಮಾತ್ರವಲ್ಲ, ವಿಜಯ ಕರ್ನಾಟಕ ಪತ್ರಿಕೆಯ ತಮ್ಮ ಬಿಸಿಲು ಬೆಳದಿಂಗಳು ಕಾಲಂನಲ್ಲಿ ಈ ಪುಸ್ತಕದ ಬಗ್ಗೆ ಬರೆಯುವ ಮೂಲಕ ಎಲ್ಲರಿಗೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರು ಬರೆಯುತ್ತಾರೆ ಎಂದು ನಾನು ನಿರೀಕ್ಷಿಸಿರಲಿಲ್ಲ. ಈಗ ಬರೆದು ಆಶೀರ್ವದಿಸಿದ್ದಾರೆ. ಗುರುಗಳಿಗೆ ನಮಸ್ಕಾರಗಳು.
ಬಿಸಿಲು ಬೆಳದಿಂಗಳು ಅಂಕಣದಲ್ಲಿ ಗುರುಗಳು ಬರೆದದ್ದು ಇಲ್ಲಿದೆ. ಓದಿ ನಿಮ್ಮ ಅನಿಸಿಕೆ ತಿಳಿಸಿ.
(ಇದನ್ನು ದೊಡ್ಡದಾಗಿ ನೋಡಲು ಲೇಖನದ ಮೇಲೆ ಕ್ಲಿಕ್ ಮಾಡಿ)

Wednesday, February 18, 2009

ಇಸ್ರೋಗೆ ಹೆಚ್ಚಿನ ಅನುದಾನ:


ಕೇಂದ್ರ ಬಜೆಟ್ ಗೆ ಎಲ್ಲೆಡೆಯಿಂದ ವ್ಯಾಪಕ ಟೀಕೆ ಎದುರಾಗಿದೆ. ಆದರೆ ಒಂದು ಸಂತಸದ ವಿಷಯ ಎಂದರೆ 'ಇಸ್ರೋ'ಗೆ ನೀಡುತ್ತಿದ್ದ ಅನುದಾನವನ್ನು ಶೇ. 27 ರಷ್ಟು ಹೆಚ್ಚಿಸಲಾಗಿದೆ.
ಈ ಅನುದಾನದಲ್ಲಿ ಹೆಚ್ಚಿನ ಹಣವನ್ನು ಚಂದ್ರಯಾನ ಯೋಜನೆಗಳಿಗೆ ಸೆಮಿ ಕ್ರಯೋಜೆನಿಕ್ ಎಂಜಿನ್ ನಿರ್ಮಾಣ, ಇನ್ನೂ ಭಾರೀ ಗಾತ್ರದ, ಭಾರದ ಉಪಗ್ರಹಗಳನ್ನು ಹಾರಿ ಬಿಡಲು ಅನುಕೂಲವಾಗುವ ಉಡಾವಣಾ ವಾಹನಗಳನ್ನು ನಿರ್ಮಿಸಲು ಬಳಸಲಾಗುವುದು.
ಕಳೆದ ವರ್ಷ ಇಸ್ರೋಗೆ 3,499 ಕೋಟಿ ನೀಡಲಾಗಿತ್ತು. ಈ ಬಾರಿ 960 ಕೋಟಿ ಹೆಚ್ಚಳ ಮಾಡಿ, ಒಟ್ಟು 4,459 ಕೋಟಿ ಹಣ ನೀಡಲಾಗುತ್ತಿದೆ. ಭವಿಷ್ಯದ ಯೋಜನೆಗಳಿಗೆ ಅವಶ್ಯವಾಗುವ ಸೆಮಿ ಕ್ರಯೋಜೆನಿಕ್ ಎಂಜಿನ್ ಅಭಿವೃದ್ಧಿಗೆ ಕಳೆದ ವರ್ಷ ಕೇವಲ 4.09 ಕೋಟಿ ನೀಡಲಾಗಿತ್ತು. ಈ ಬಾರಿ ಇದಕ್ಕಾಗಿ 75 ಕೋಟಿ ನೀಡಲಾಗುತ್ತಿದೆ. ಚಂದ್ರಯಾನಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಕಳೆದ ವರ್ಷ 88 ಕೋಟಿ ನೀಡಿದ್ದರೆ ಈ ವರ್ಷ 90 ಕೋಟಿ ಬಳಕೆ ಮಾಡಬಹುದು. ಎಸ್ ಎಲ್ ವಿ ಮಾರ್ಕ್ -3 ಉಡಾವಣಾ ವಾಹನ ಅಭಿವೃದ್ಧಿಗೆ 217 ಕೋಟಿ ನೀಡಲಾಗುತ್ತಿದೆ. ಇದು ಪೂರ್ತಿ ಸಿದ್ಧವಾದರೆ ಸಾಕಷ್ಟು ಭಾರದ ಉಪಗ್ರಹಗಳನ್ನು ಹಾರಿ ಬಿಡಬಹುದು.
ಇದರಲ್ಲಿ ಪ್ರಮುಖವಾಗಿ ಮಾನವ ಸಹಿತ ನೌಕೆ ಕಳುಹಿಸಲು ಬೇಕಾದ ಯೋಜನೆಗೆ ಚಾಲನೆ ನೀಡಿದ್ದು, ಇದಕ್ಕಾಗಿ 50 ಕೋಟಿ ನಿಗದಿ ಪಡಿಸಲಾಗಿದೆ.

Saturday, February 14, 2009

ಇಸ್ರೊದಿಂದ ಇಂಟರ್ ನ್ಯಾಷನಲ್ ಇಯರ್ ಆಫ್ ಅಸ್ಟ್ರಾನಮಿ.


Welcome,
2009 is being celebrated worldwide as the "International Year of Astronomy (IYA)". Indian Space Research Organisation (ISRO) is one of the organisational associates of IYA. The details of the national program on IYA activities in India is available at Inter University Centre for Astronomy & Astrophysics (IUCAA).
The Indian space program has always encouraged the study of the universe using space as a platform. The research work in the areas of cosmic rays, infrared, X-rays, gamma ray and solar physics were initially carried out using high altitude balloons and rockets. Today many of these studies are carried out using satellite experiments. Since 90s, opportunities to fly space science experiments have increased and numerous science payloads have been deployed as piggyback systems on several satellites from India. These include:

SROSS-series GRB experiments.
IXAE on IRS-P3.
SOXS on GSAT-2.
More recently, ISRO has undertaken development of dedicated satellites for space sciences. The first of these CHANDRAYAAN-1 was launched on October 22, 2008, marking India's entry into solar system exploration studies. CHANDRAYAAN-1 will soon be followed by a dedicated multi-wavelength astronomy satellite ASTROSAT, slated for 2010 launch.

ISRO's other near term activities in space astronomy include:
RT-2 on Photon-CORONAS satellite
TAUVEX on GSAT-4.
Aditya
CHANDRAYAAN-2

Tuesday, February 10, 2009

Chandrayaan a wake up call, says Annadurai

(From The Hindu)

COIMBATORE: After 2010 there will be many moon missions undertaken by other countries. Anticipating this, we wanted to complete ours before they began. When we step into the moon tomorrow, we should be leaders among the other countries, Project Director of Chandrayaan – 1 M. Annadurai said here on Saturday. Responding to a felicitation given by Avinashilingam University for Women, he said the mission that was slated to be completed in seven years was accomplished in a record time of four years without any hitch.

“The Rs. 355 crore that was spent for the mission is not too high a cost for this kind of achievement. This is to show that we can achieve anything if we can work as a team. You need not have a background. Opportunities do not always knock at our doors. But, when they knock, we should be able to respond to them as a team. That will yield the best results,” Mr. Annadurai said.

Asking students to hold on to opportunities offered by the country, he said, “It is not a pride to go abroad and earn. India is throwing a red carpet of opportunities for you to grab. When India has given me the opportunity, it can give each one of you also”.

Terming the moon mission a “wake up” call not only for the U.S., but also for India, he said it was something the youth could look up to for doing more for the country. Since India could boast of a large youth population, it should serve as a productive human resource. He asked the students to be environmentally conscious. “Women have a more important role in this duty because they have to take on the role of teachers to their children at home. The role of a mother as a teacher is more significant than any other,” Mr. Annadurai said.

T.K. Shanmuganandam, Chancellor, Saroja Prabhakaran, Vice-Chancellor, and Lakshmi Santa Rajagopal, former Vice-Chancellor, of the university were among those who offered felicitations.

Monday, February 2, 2009

ಚಂದ್ರನ ಕಂದರಗಳು.

ಚಂದ್ರಯಾನದಲ್ಲಿರುವ ಟೆರೇನ್ ಮ್ಯಾಪಿಂಗ್ ಕ್ಯಾಮೆರಾ ಚಂದ್ರನ ಕಂದರಗಳು, ಗುಡ್ಡ ಬೆಟ್ಟಗಳ ಚಿತ್ರಗಳನ್ನು ತೆಗೆದು ರವಾನಿಸುತ್ತಿದೆ. ಇಲ್ಲಿ ಅಂತಹ ಎರಡು ಚಿತ್ರಗಳಿವೆ. ಒಂದರಲ್ಲಿ 618 ಮೀಟರ್ ಎತ್ತರದ ಬೆಟ್ಟವಿದ್ದರೆ, ಮತ್ತೊಂದರಲ್ಲಿ 400 ಮೀಟರ್ ಆಳದ ಕಂದರವಿದೆ. ಇಂತಹ ಚಿತ್ರಗಳು ಲಭ್ಯವಾಗುತ್ತಿರುವುದು ಇದೇ ಮೊದಲು.

Wednesday, January 28, 2009

ಕಲಾಂರಿಂದ ಚಂದ್ರಯಾನ ಪುಸ್ತಕ ಬಿಡುಗಡೆ


ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಚಂದ್ರಯಾನ ಪುಸ್ತಕವನ್ನು ನವದೆಹಲಿಯಲ್ಲಿ ಜನವರಿ 27 ರಂದು ಬಿಡುಗಡೆ ಮಾಡಿದರು. ದಿ ವೀಕ್ ರೆಸಿಡೆಂಟ್ ಎಡಿಟರ್ ಸಚ್ಚಿದಾನಂದ ಮೂರ್ತಿ ಹಾಗೂ ಶಿವಪ್ರಸಾದ್ ಉಪಸ್ಥಿತರಿದ್ದಾರೆ.



ನವದೆಹಲಿ, ಜ. 27: ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸ್ಟಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಇಂದು ಇಲ್ಲಿ ಹೇಳಿದರು.
ಅವರು, ಪತ್ರಕರ್ತ ಶಿವಪ್ರಸಾದ್ ಬರೆದಿರುವ ಚಂದ್ರಯಾನ ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.
ಕಾನ್ಸ್ಟಾಂಟಿನ್ ಕಿವುಡನಾಗಿದ್ದ. ಆದರೆ ಅಧ್ಯಯನದಲ್ಲಿ ಅತೀವ ಆಸಕ್ತಿ ಹೊಂದಿದ್ದ. ತನ್ನ ಅಧ್ಯಯನದಿಂದ ವಿವಿಧ ಸಮೀಕರಣಗಳನ್ನು ರಚಿಸಿದ್ದ. ಆ ಮೂಲಕ ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು ತಿಳಿಸಿದ್ದ. ಇಂದು ಆತನ ಊಹೆ ನಿಜವಾಗಿದೆ. ನಾವು ಚಂದ್ರನ ಮೇಲೆ ಹೊಗಿ ಬಂದಿದ್ದೇವೆ. ಹೀಗಾಗಿ ಚಂದ್ರಯಾನದ ಕಲ್ಪನೆಯ ಜನಕ ಕನ್ಸ್ಟಾಂಟಿನ್ ಎಂದರು.
ಪುಸ್ತಕ ಬಿಡುಗಡೆ ಮಾಡಿದ ನಂತರ ಪ್ರಥಮ ಪ್ರತಿಯನ್ನು ದಿ ವೀಕ್ ನ ಸ್ಥಾನಿಕ ಸಂಪಾದಕರಾದ ಕೆ.ಎಸ್. ಸಚ್ಚಿದಾನಂದ ಮೂರ್ತಿ ಅವರಿಗೆ ನೀಡಿದರು. ನಂತರ ಪುಸ್ತಕದಲ್ಲಿನ ವಿವಿಧ ಅಧ್ಯಾಯಗಳ ಬಗ್ಗೆ ಮಾಹಿತಿ ಪಡೆದರು.
ಚಂದ್ರಯಾನ ಉಡ್ಡಯನದ ನಂತರ ಅಮೇರಿಕಾದ ನಾಸಾ, ಒಬಾಮಾ ನೀಡಿದ್ದ ಪ್ರತಿಕ್ರಿಯೆ ಹಾಗೂ ಆ ಬಗ್ಗೆ ಮಾಧವನ್ ನಾಯರ್ ನೀಡಿದ್ದ ವಿವರಣೆ ಇರುವ ಅಧ್ಯಾಯವನ್ನು ಲೇಖಕ ಶಿವಪ್ರಸಾದ್ ಅವರಿಂದ ಓದಿಸಿ, ವಿವರಣೆ ಪಡೆದರು.
ನಂತರ ಮತ್ತೋರ್ವ ಪತ್ರಕರ್ತ ವಿನಾಯಕ್ ಭಟ್ ಬರೆದಿದ್ದ ದಿ ಗ್ರೇಟ್ ಮೂನ್ ಹೋಕ್ಸ್-1835 ಅಧ್ಯಾಯದ ಬಗ್ಗೆಯೂ ವಿವರಣೆ ಪಡೆದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿನಾಯಕ್ ಭಟ್ ಅವರಿಗೆ ಅವರ ಲೇಖನದಲ್ಲಿದ್ದ ಫೋಟೋ ತೋರಿಸಿ, ಈ ಬಗ್ಗೆ ವಿವರಣೆ ಕೇಳಿ ಆನಂದಿಸಿದರು.
'ಚಂದ್ರಯಾನ ಪುಸ್ತಕ ಬರೆಯಲು ಒಂದು ವರ್ಷ ತೆಗೆದುಕೊಂಡಿದ್ದೀರಿ. ಐತಿಹಾಸಿಕ ಯೋಜನೆಯಾದ ಚಂದ್ರಯಾನ ಕುರಿತ ಸಮಗ್ರ ವಿವರ ಇರುವ ಪುಸ್ತಕವನ್ನು ಹೊರ ತಂದಿರುವುದು ಉತ್ತಮ ಪ್ರಯತ್ನ' ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ 'ಪ್ರಜಾವಾಣಿ' ವಿಶೇಷ ಪ್ರತಿನಿಧಿ ದಿನೇಶ್ ಅಮಿನ್ ಮಟ್ಟು, 'ಡೆಕ್ಕನ್ ಹೆರಾಲ್ಡ್' ಸ್ಥಾನಿಕ ಸಂಪಾದಕ ಬಿ.ಎಸ್. ಅರುಣ್, 'ವಿಜಯ ಕರ್ನಾಟಕ' ದೆಹಲಿ ಪ್ರತಿನಿಧಿ ವಿನಾಯಕ್ ಭಟ್, ಕರ್ನಾಟಕ ವಾರ್ತಾ ಕೇಂದ್ರದ ಸಹಾಯಕ ನಿರ್ದೆಶಕ ವೀರಣ್ಣ ಕಮ್ಮಾರ, ಸುವರ್ಣ ಚಾನೆಲ್ ವರದಿಗಾರ ಪ್ರಶಾಂತ್ ನಾತೂ ಉಪಸ್ಥಿತರಿದ್ದರು.

Monday, January 26, 2009

ಪದ್ಮ ವಿಭೂಷಿತ ನಾಯರ್


ಚಂದ್ರಯಾನ ರೂವಾರಿ, ಇಸ್ರೊ ಅಧ್ಯಕ್ಷ ಮಾಧವನ್ ನಾಯರ್ ಅವರಿಗೆ ಭಾರತ ಸರಕಾರ 2009 ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಚಂದ್ರಯಾನದ ಯಶಸ್ಸು ಇಡೀ ದೇಶದ ಯುವ ಮನಸ್ಸುಗಳ ಮೈ ಮನಸುಗಳನ್ನು ಬಡಿದೆಬ್ಬಿಸಿದೆ. ವಿದ್ಯಾರ್ಥಿಗಳನ್ನು ವಿಜ್ಞಾನದೆಡೆಗೆ ಸೆಳೆದಿದೆ. ಚಂದ್ರಯಾನದ ಯಶಸ್ಸು ಇಡೀ ದೇಶದ ವಿಜ್ಞಾನ ಕ್ಷೇತ್ರವನ್ನೇ ಬದಲಿಸಲಿದೆ. ಈ ಯೋಜನೆಯ ಯಶಸ್ಸು ಹೊತ್ತಿದ್ದ ನಾಯರ್ ಅವರಿಗೆ ಈ ಪ್ರಶಸ್ತಿ ದೊರೆತಿರುವುದು ಸಂತೋಷ. ಇದು ಇಸ್ರೊದ ಎಲ್ಲಾ ವಿಜ್ಞಾನಿಗಳಿಗೆ ಸಂದ ಗೌರವ.
ಮಾಧವನ್ ನಾಯರ್ ಹಾಗೂ ಚಂದ್ರಯಾನ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆಗಳು.
ಮಾಧವನ್ ನಾಯರ್ ಅವರ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ http://www.isro.org/mnair/index.htm ಕ್ಲಿಕ್ ಮಾಡಿ.

Friday, January 16, 2009

ನಿಮಗೆ ೫೦೦ ರೂ. ಕೊಟ್ರೆ ಏನು ಮಾಡ್ತೀರಾ??

ನಮ್ಮಲ್ಲಿ 500 ರೂ. ಕೊಟ್ಟು ಹೇರ್ ಕಟಿಂಗ್ ಮಾಡಿಸುವವರಿದ್ದಾರೆ.
ನಮ್ಮಲ್ಲಿ 500 ರೂ. ಕೊಟ್ಟು ಥಂಡಾ ಬಿಯರ್ ಹೀರುವವರಿದ್ದಾರೆ.
ನಮ್ಮಲ್ಲಿ 500 ರೂ. ಟಿಪ್ಸ್ ಕೊಟ್ಟು ಎದ್ದು ಬರುವವರಿದ್ದಾರೆ.
ವ್ಯಾಲಂಟೈನ್ ಡೇ ಬಂದರೆ 500 ರೂ. ಏನು? 50,000 ಖರ್ಚು ಮಾಡುವವರಿಗೇನೂ ಕಡಿಮೆ ಇಲ್ಲ.
ಆದರೆ 500 ರೂ. ನಿಜವಾದ ಬೆಲೆ ಏನು?
ಈ 500 ರೂ. ಓದುವ ಆಸೆ ಇರುವ ಯಾವುದೋ ಬಡ ಮಗುವಿನ ಶಾಲೆಯ ಫೀಜ್ ಆಗಬಹುದು.
ಈ ಬಗ್ಗೆ ಚಿಂತನೆಗೆ ಹಚ್ಚುವ ತುಂಬಾ ಸರಳ,ಸುಂದರ ವಿಡಿಯೋ ಇಲ್ಲಿದೆ. ಇದನ್ನು ಪೂನಾದಲ್ಲಿರುವ ಸೆಂಟರ್ ಫಾರ್ ಕಮ್ಯುನಿಕೇಷನ್ ಅಂಡ್ ಡೆವಲಪ್ ಮೆಂಟ್ ಸ್ಟಡೀಸ್ ತಯಾರಿಸಿ ಇಂಟರ್ ನೆಟ್ ನಲ್ಲಿ ಹಾಕಿದೆ.
ನೀವೂ ನೋಡಿ.
ಇತರರಿಗೂ ತೋರಿಸಿ.

Tuesday, January 13, 2009

ಅಪರೂಪದ ಮಾಹಿತಿ ರವಾನಿಸುತ್ತಿರುವ ಚಂದ್ರ್ರಯಾನ:

ಚಂದ್ರನ 3-ಡಿ ಚಿತ್ರ
ಅಕ್ಟೋಬರ್ ತಿಂಗಳಲ್ಲಿ ಹಾರಿ ಬಿಟ್ಟಿರುವ ಚಂದ್ರಯಾನ ಇದುವರೆಗೆ ಚಂದ್ರನ ಎಷ್ಟು ಚಿತ್ರಗಳನ್ನು ಕಳುಹಿಸಿರಬಹುದು? 1000, 2000, 5000, 10,000?ಊಹ್ಞೂಂ! ಚಂದ್ರಯಾನ ಇದುವರೆಗೆ 40 ಸಾವಿರಕ್ಕೂ ಹೆಚ್ಚು ಚಿತ್ರಗಳನ್ನು ರವಾನಿಸಿದೆ. ಇಸ್ರೊದ ಅಧ್ಯಕ್ಷ ಮಾಧವನ್ ನಾಯರ್ ಸ್ವತ: ಈ ವಿಷಯವನ್ನು ತಿಳಿಸಿದ್ದಾರೆ. ಅಷ್ಟೇ ಅಲ್ಲ! ಚಂದ್ರನ ಮೇಲ್ಮೈಯ ಸಂಪೂರ್ಣವಾದ 3-ಡಿ ಚಿತ್ರೀಕರಣವನ್ನೂ ಸಹ ಮಾಡಲಾಗಿದೆ.
ಮತ್ತೊಂದು ಸಂತಸದ ವಿಷಯ ಎಂದರೆ ಇದೇ ಮೊದಲ ಬಾರಿಗೆ ಈ ರೀತಿ ಚಂದ್ರನ ಮೇಲ್ಮೈಯ ಸಂಪೂರ್ಣವಾದ ಚಿತ್ರಣ ಲಭ್ಯವಾಗುತ್ತಿರುವುದು. ಈ ಹಿಂದೆ ಚಂದ್ರನಲ್ಲಿಗೆ ಅನೇಕ ದೇಶಗಳು ತಮ್ಮ ಉಪಗ್ರಹಗಳನ್ನು ಕಳುಹಿಸಿ ಫೋಟೋ ತೆಗೆದಿದ್ದರೂ, ಚಂದ್ರಯಾನದಷ್ಟು ಮಾಹಿತಿಯನ್ನು, ಚಂದ್ರನ ಸಂಪೂರ್ಣ ಚಿತ್ರಣವನ್ನು ಅವು ನೀಡಿರಲಿಲ್ಲ. ಇನ್ನು ಗುಣಮಟ್ಟದಲ್ಲೂ ಚಂದ್ರಯಾನ ಕಳುಹಿಸುತ್ತಿರುವ ಚಿತ್ರಗಳಿಗೆ ಸಾಟಿ ಇಲ್ಲ! ಈ ಚಿತ್ರಗಳನ್ನು ಆಧರಿಸಿ, ಚಂದ್ರನ ಮೇಲ್ಮೈ, ಅಲ್ಲಿರುವ ಖನಿಜಗಳ ಅಧ್ಯಯನ ನಡೆಯುತ್ತಿದೆ. ದಿನಗಳೆದಂತೆ ಇನ್ನೂ ಹೆಚ್ಚಿನ ಹಾಗೂ ಅಪರೂಪದ ಮಾಹಿತಿ ಲಭ್ಯವಾಗುತ್ತಾ ಹೋಗುತ್ತದೆ.
ಚಂದ್ರನ ಕುರಿತ ಇನ್ನೂ ಯಾವ ಯಾವ ರಹಸ್ಯಗಳ ಅನಾವರಣ ಆಗುತ್ತದೋ ಗೊತ್ತಿಲ್ಲ!

Friday, January 9, 2009

11 ಸಲಹೆಗಳು

ಚಂದ್ರಯಾನದ ಯಶಸ್ಸು ಇಡೀ ದೇಶದ ಮಕ್ಕಳ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ವಿಜ್ಞಾನದೆಡೆಗೆ ಆಸಕ್ತಿ ಮೂಡುವಂತೆ ಮಾಡಿದೆ. ಇದರ ಪರಿಣಾಮ ಇತ್ತೀಚೆಗೆ ನಡೆದ ವಿಜ್ಞಾನ ಸಮ್ಮೇಳನದಲ್ಲೂ ಕಂಡು ಬಂದಿದೆ.ಇತ್ತೀಚೆಗೆ ಶಿಲ್ಲಾಂಗ್ನಲ್ಲಿ ನಡೆದ 96 ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ನಲ್ಲಿ ವಿಜ್ಞಾನದ ಅಭಿವೃದ್ಧಿ ಬೆಳವಣಿಗೆ ಹಾಗೂ ಹೆಚ್ಚಿನ ಮಕ್ಕಳಲ್ಲಿ ವಿಜ್ಞಾನದೆಡೆಗೆ ಆಸಕ್ತಿ ಮೂಡುವಂತೆ ಮಾಡಲು 11 ಸಲಹೆಗಳನ್ನು ಕೇಂದ್ರ ಸರಕಾರಕ್ಕೆ ನೀಡಲಾಗಿದೆ.
ಆ 11 ಸಲಹೆಗಳ ಸಂಕ್ಷಿಪ್ತ ನೋಟ ಇಲ್ಲಿದೆ.

Sunday, January 4, 2009

ಚಂದ್ರೋದಯ ವಾಣಿ

ಉದಯವಾಣಿಯಲ್ಲಿ ಪ್ರಕಟವಾಗಿರುವ ಚಂದ್ರಯಾನ ಪುಸ್ತಕ ಪರಿಚಯ

Thursday, January 1, 2009

ಚಂದ್ರನ ಚಿತ್ರಗಳು

ಚಂದ್ರಯಾನದಲ್ಲಿರುವ ಟಿಎಂಸಿ ಉಪಕರಣ ತೆಗೆದ ಭೂಮಿಗೆ ಕಾಣದ ಚಂದ್ರನ ಮತ್ತೊಂದು ಬದಿಯ ಚಿತ್ರ.
ಎಚ್ ವೈ ಎಸ್ ಐ ಉಪಕರಣ ತೆಗೆದ ಚಂದ್ರನ ಮತ್ತೊಂದು ಬದಿಯ ಚಿತ್ರ.
ಚಂದ್ರನ ಮೇಲ್ಮೈಯ ಇನ್ನೂ ಮೂರು ಚಿತ್ರಗಳು.
ಅಂದಹಾಗೆ ಈ ಚಿತ್ರದಲ್ಲಿ ಕಾಣುವ ಚಂದ್ರನ ಮೇಲ್ಮೈ ಭಾಗ ಎಷ್ಟು ಕಿ.ಮಿ.ಉದ್ದ ಇದೆ ಗೊತ್ತೆ?
ಕೇವಲ 395ಕಿ.ಮಿ.!!

ಗಮನಕ್ಕೆ: ದೊಡ್ಡ ಚಿತ್ರಗಳನ್ನು ವೀಕ್ಷಿಸಲು ಆಯಾ ಚಿತ್ರದ ಮೇಲೆ ಕ್ಲಿಕ್ ಮಾಡಿ.